ಮಹಾತ್ಮ ಗಾಂಧೀಜಿಯವರ 154ನೇ ಜನ್ಮದಿನದ ಆಚರಣೆಯ ಪ್ರಯುಕ್ತ, ‘ಸ್ವಚ್ಛ ದಿವಸ’ ಪರಿಕಲ್ಪನೆ ಅಡಿಯಲ್ಲಿ ಕಾಲೇಜಿನ ಸುತ್ತಮುತ್ತನ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳೆಲ್ಲಾ ಉತ್ಸುಕತೆಯಿಂದ ಸ್ವಚ್ಛತೆಯ ದಿವಸದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಕೈಗೊಂಡು ಪೂಜ್ಯ ರನ್ನು ಸ್ಮರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಸುನಿಲ್ ಪಂಡಿತ್ ರು ಮಹಾತ್ಮ ಗಾಂಧೀಜಿಯವರ ವಿಚಾರಧಾರೆಗಳ ಪ್ರಸ್ತುತ ದಿನಮಾನದಲ್ಲಿ ಅಗತ್ಯತೆ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಪ್ರಾಮಾಣಿಕತೆ ಹಾಗೂ ಸರಳ ಬದುಕಿನ ವಿಶೇಷತೆಗಳನ್ನು ಅನೇಕ ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ದೈಹಿಕ ಶಿಕ್ಷಕರಾದ ಲಕ್ಷ್ಮಣ್ ಜಿ.ಡಿ ಅವರು ವಸತಿ ನಿಲಯದ ವಾರ್ಡನ್ ಗಳು ಉಪಸ್ಥಿತರಿದ್ದರು.

