Skip to content Skip to footer

ನಿವೃತ್ತ ಸೈನಿಕ ಶ್ರೀಯುತ ಗೋಪಾಲಕೃಷ್ಣ ಭಟ್ ಕಾಂಚೋಡು ಇವರು ತಮಗೆ ಸರಕಾರ ನೀಡಿದ ಜಾಗದಲ್ಲಿ ಡ್ರ್ಯಾಗನ್ ಫ್ರೂಟ್ ನ ಸಾವಯವ ಮಾದರಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು ಪ್ರಗತಿಪರ ಕೃಷಿಕರೆಂದು ಗುರುತಿಸಿಕೊಂಡು ಗೌರವ ಡಾಕ್ಟರೇಟ್ ಕೂಡ ಪಡೆದಿದ್ದು, ಇವರ ಸಾಧನೆಯ ಕೃಷಿ ಕಾರ್ಯವನ್ನು ಇಕೋ ಕ್ಲಬ್ ನ ಸಹಯೋಗದಲ್ಲಿ ವಿದ್ಯಾರ್ಥಿಗಳು ವೀಕ್ಷಿಸಿದರು. ಕೃಷಿ ಕುರಿತಾಗಿ ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕಿದರು, ರುಚಿ ರುಚಿಯಾದ ಡ್ರ್ಯಾಗನ್ ಫ್ರೂಟ್ ನ್ನು ಸವಿದರು. ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.ಇಕೋಕ್ಲಬ್ ನ ಸಂಚಾಲಕರಾದ ಶ್ರೀಮತಿ ವಾಣಿ ಎಂ. ಎ., ಜೀವಶಾಸ್ತ್ರ ಉಪನ್ಯಾಸಕರಾದ ಪ್ರದೀಪ್.ಕೆ ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.