Skip to content Skip to footer

ಜ್ಞಾನದ ಮಾರ್ಗದಿಂದ ಸುಜ್ಞಾನದೆಡೆಗೆ ಕೊಂಡೊಯ್ಯುವ ಶಿಕ್ಷಕ ವೃತ್ತಿ ಗೌರವಯುತವಾದದ್ದು. ವಿದ್ಯಾರ್ಥಿ ದೆಸೆಯಲ್ಲೇ ತಾನು ಗಳಿಸುವ ಅಂಕದೊಂದಿಗೆ ಉತ್ತಮ ನಡತೆ ಹಾಗೂ ಮೌಲ್ಯಯುತ ಬದುಕು ಕಟ್ಟಿಕೊಳ್ಳಲು ತಯಾರಾಗುವುದು ಶಿಕ್ಷಕರಿಗೆ ನೀಡುವ ದೊಡ್ಡ ಕೊಡುಗೆ. ಗುರು ಹಾಕಿಕೊಟ್ಟ ಮಾರ್ಗದಲ್ಲಿ ಭವಿಷ್ಯವನ್ನು ಸುಂದರವಾಗಿ ಕಟ್ಟುವ ಕಾರ್ಯದಲ್ಲಿ ಸನ್ನದ್ದ ರಾಗಿ ಕಲಿಸಿದ ಗುರುವಿಗೂ, ಸಂಸ್ಥೆಗೂ ಕೀರ್ತಿ ತರುವಂತವರಾಗಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಸುನಿಲ್ ಪಂಡಿತ್ ಅವರು ಹೇಳಿದರು.

ಕಾಲೇಜಿನ ವಿದ್ಯಾರ್ಥಿಗಳು ಒಟ್ಟು ಸೇರಿ ಆಯೋಜಿಸಿದ ‘ಶಿಕ್ಷಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರಿಗೆ ಉಡುಗೊರೆಗಳನ್ನು ನೀಡಿ ಗೌರವಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮಿಸಿದರು.ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಪೂರ್ವಿಕ್ ನಿರೂಪಿಸಿದರೆ,ವರುಣ್ ವಂದಿಸಿದರು.