ಸಾಂಸ್ಕೃತಿಕ ಕಾರ್ಯಕ್ರಮಗಳು ಮನರಂಜನೆ ಮೂಲಕ ಸಂಸ್ಕಾರ ಸಂದೇಶ ಗಳ ರವಾನೆಯ ರಹದಾರಿಯಾಗಬೇಕು ಪಠ್ಯೇತರ ಚಟುವಟಿಕೆಗಳು ಕಲಿಕೆಗೆ ಪೂರಕವೂ ಹೌದು. ಹೊಸ ಮಕ್ಕಳು ಈ ಪರಿಸರಕ್ಕೆ ಹೊಂದಿಕೊಳ್ಳಲು ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನ ಸೂಕ್ತವಾಗಿರಲಿ ನಿಮ್ಮನ್ನು ಅನುಸರಿಸುವಂತಿರಲಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಸುನೀಲ್ ಪಂಡಿತ್ ಹೇಳಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ನೂತನ ವಿದ್ಯಾರ್ಥಿಗಳಿಗೆ ಸ್ವಾಗತ’ ಕಾರ್ಯಕ್ರಮದಲ್ಲಿ ಮಾತನಾಡಿದರು.ನಂತರ ಹಿರಿಯ ವಿದ್ಯಾರ್ಥಿಗಳು ನೃತ್ಯ, ಸಂಗೀತ, ಸ್ಕಿಟ್ ಮುಂತಾದ ವಿವಿಧ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಆಟಗಳನ್ನು ಆಡಿಸುವುದರೊಂದಿಗೆ ಮನರಂಜಿಸಿದರು.
ಕಾಲೇಜಿನ ಉಪನ್ಯಾಸಕರು, ಗ್ರಂಥ ಪಾಲಕರು, ವಾರ್ಡನ್ಗಳು ಉಪಸ್ಥಿತರಿದ್ದರು, ಸೌರವ್ ಹಾಗೂ ಪೂರ್ವಿಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

