ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಹಾಗೂ ಉಪನ್ಯಾಸಕರ ಸಂಘ(ರಿ) ಮಂಗಳೂರು ವತಿಯಿಂದ ಹಮ್ಮಿಕೊಂಡಿದ್ದ ‘ಶಿಕ್ಷಕರ ದಿನಾಚರಣೆ’ ಕಾರ್ಯಕ್ರಮದಲ್ಲಿ 2022-2 3ರ ಶೈಕ್ಷಣಿಕ ಸಾಲಿನಲ್ಲಿ 100% ಫಲಿತಾಂಶ ಪಡೆದ ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ಎಲ್ಲಾ ವಿಷಯವಾರು ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಂದರ್ಭದಲ್ಲಿ
ವಿಧಾನ ಪರಿಷತ್ ಸದಸ್ಯರು ಆಗಿರುವ ಶ್ರೀ ಎಸ್.ಎಲ್ ಭೋಜೇಗೌಡ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆಗಿರುವ ಶ್ರೀ ಜಯಣ್ಣ ಸಿ.ಡಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷರು ಆಗಿರುವ ಕೆ.ಎನ್ ಗಂಗಾಧರ ಆಳ್ವಾ ಉಪಸ್ಥಿತರಿದ್ದು ಎಲ್ಲರನ್ನೂ ಅಭಿನಂದಿಸಿದರು.

