Skip to content Skip to footer

ಕಾಲೇಜಿನ ವಿದ್ಯಾರ್ಥಿಗಳಿಗೆ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ. ಪೂ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನ ಕುಮಾರ್ ಐತಾಳ್ ಆಗಮಿಸಿ ಕೈ ತೊಳೆಯುವ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ವಿವರಿಸಿ ಪ್ರಾತ್ಯಕ್ಷಿಕೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಶ್ರೀ ಸುನಿಲ್ ಪಂಡಿತ್ ಆರೋಗ್ಯಕರ ಬದುಕಿನಲ್ಲಿ ಕೈ ತೊಳೆಯುವ ಅಗತ್ಯತೆ ಹಾಗೂ ಅದರ ಮಹತ್ವವನ್ನು ಹೇಳಿದರು. ಉಪಪ್ರಾಂಶುಪಾಲ ಮನೀಶ್ ಕುಮಾರ್ ಮತ್ತು ಸಂಸ್ಕೃತ ವಿಭಾಗದ ಉಪನ್ಯಾಸಕ ಮಹೇಶ್ ಎಸ್. ಎಸ್ ಉಪಸ್ಥಿತರಿದ್ದರು.